
Basavaraj S Bommai
@BSBommai • 523,411 subscribers
Member of Parliament, Haveri - Gadag Constituency and Former Chief Minister of Karnataka.
Videos

What a view! 10-lane Bengaluru-Mysuru Expressway alongside Vande Bharat Express, a visual depicting the story of world class infrastructure & unprecedented growth in Karnataka. Under Hon’ble PM Narendra Modi Ji, our Double Engine government is working wonders in the state.
Basavaraj S Bommai4,046,940 Aufrufe • vor 3 Jahren

Siddaramaiah is compromised. He had manipulated his way up. He became the CM twice. I don't see immediate rebellion. Congress never told the truth to the people. Who will buy what they say? I don't think there will be a smooth transfer of power, if it happens," he adds, on being asked about Congress denying any speculation of a change of CM in Karnataka.
Basavaraj S Bommai23,853 Aufrufe • vor 1 Monat

ಹಾವೇರಿ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನೀಡದಿರುವುದಕ್ಕೆ ಜಿಲ್ಲೆಯ ಜನತೆಗೆ, ಎಲ್ಲ ಪಕ್ಷದ ನಾಯಕರಿಗೆ ನಿರಾಸೆಯಾಗಿದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಯಾಕೆ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೇವು. ಆಗ ಸಕಾರಾತ್ಮವಾಗಿ ಸ್ಪಂದನೆ ಮಾಡಿದ್ದರು. ಬಜೆಟ್ ನಲ್ಲಿ ಘೋಷಣೆ ಮಾಡದೇ ಇರುವುದಕ್ಕೆ ನಿರಾಸೆಯಾಗಿದೆ. ಹಾವೇರಿ ಜಿಲ್ಲೆಗೆ ಮೆಡಿಕಲ್ ಕಾಲೇಜು, ಯುನಿವರ್ಸಿಟಿ, ಇಂಜನೀಯರಿಂಗ್ ಕಾಲೇಜು, ಲಾ ಕಾಲೇಜು ಮಾಡಿದ್ದು ನಮ್ಮ ಸರ್ಕಾರ, ನಮ್ಮ ಜಿಲ್ಲೆ ರಾಷ್ಟ್ರೀಯ ಹೆದ್ದಾರಿಯಲ್ಲಿದೆ. ಏನಾದರೂ ಅನಾಹುತ ಆದರೆ ಬಹಳ ಜನರು ಹುಬ್ಬಳ್ಳಿ ಅಥವಾ ದಾವಣಗೆರೆಗೆ ಹೋಗಬೇಕು. ಆಗ ಬಹಳಷ್ಟು ಜನ ಜೀವ ಕಳೆದುಕೊಳ್ಳುತ್ತಾರೆ. ಹೀಗಾಗಿ ಸೂಪರ್ ಸ್ಪೆಷಾಲಿಟಿ ಆಗಬೇಕೆಂದು ಹೇಳಿದ್ದೇವು. ಅವರದು ಕೇವಲ ಮಾತಿನ ಸಹಾನುಭೂತಿಯಾಗಿದೆ. ಈಗಲೂ ಕೂಡ ಅವರು ಮಾಡಿರುವ ಅನ್ಯಾಯ ಸರಿಪಡಿಸಲು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅನುಮತಿ ಕೊಟ್ಟು ಪೂರಕ ಬಜೆಟ್ ನಲ್ಲಾದರೂ ಹಣ ಒದಗಿಸಿದರೆ ಕೆಲಸ ಆರಂಭವಾಗುತ್ತದೆ. ಆದ್ದರಿಂದ ಕೂಡಲೇ ಮುಖ್ಯಮಂತ್ರಿಗಳು ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಘೋಷಿಸಲಿ ಎಂದು ಆಗ್ರಹಿಸುತ್ತೇನೆ.
Basavaraj S Bommai10,728 Aufrufe • vor 2 Monaten

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮುಚ್ಚಲಾಗಿದ್ದ ಲೋಕಾಯುಕ್ತ ಸಂಸ್ಥೆಯನ್ನು, ನಾವು ರಾಜ್ಯದಲ್ಲಿ ಭ್ರಷ್ಟಾಚಾರ ಸಮಗ್ರವಾಗಿ ನಿಗ್ರಹಿಸುವ ಉದ್ದೇಶದಿಂದ ಪುನರಾರಂಭಿಸಿದ್ದೇವು. ಶಾಸಕರ ಪುತ್ರ ಹಣ ಪಡೆದ ವಿಚಾರದ ಬಗ್ಗೆ ಲೋಕಾಯುಕ್ತ ಸಂಸ್ಥೆ ಸ್ವತಂತ್ರವಾಗಿ, ನಿಷ್ಪಕ್ಷಪಾತವಾಗಿ ತನಿಖೆ ಮಾಡಲಿ ಎಂಬುದು ನಮ್ಮ ನಿಲುವಾಗಿದೆ. 1/2
Basavaraj S Bommai60,169 Aufrufe • vor 3 Jahren

ಮುಂಬರುವ ಚುನಾವಣೆಗಳಿಗೆ ಸಂಬಂಧಿಸಿದಂತೆ, ಭಾರತೀಯ ಜನತಾ ಪಕ್ಷಕ್ಕೆ ತಮ್ಮ ಬೆಂಬಲವನ್ನು ಸೂಚಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಶ್ರೀಮತಿ ಸುಮಲತಾ ಅಂಬರೀಶ್ ರವರಿಗೆ ತುಂಬು ಹೃದಯದ ಧನ್ಯವಾದಗಳು. ಸುಮಲತಾರವರ ಬೆಂಬಲದಿಂದ ಮಂಡ್ಯ ಭಾಗದಲ್ಲಿ ಬಿಜೆಪಿ ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ. Sumalatha Ambareesh 🇮🇳 ಸುಮಲತಾ ಅಂಬರೀಶ್
Basavaraj S Bommai39,440 Aufrufe • vor 3 Jahren

ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕದಲ್ಲಿ ಉದ್ಯೋಗ ನೀತಿಯನ್ನು ಜಾರಿಗೆ ತಂದಿದ್ದೇವೆ. ಹೆಚ್ಚು ಉದ್ಯೋಗ ಸೃಷ್ಟಿ ನಮ್ಮ ಸರ್ಕಾರದ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಸುವ ಉದ್ಯಮಕ್ಕೆ, ಇನ್ಸೆಂಟಿವ್ ನೀಡುವ ವ್ಯವಸ್ಥೆಯನ್ನು ಜಾರಿಗೆ ತಂದಿದ್ದೇವೆ. ಇದು ನವ ಕರ್ನಾಟಕದ ಮೂಲಮಂತ್ರವಾಗಿದೆ.
Basavaraj S Bommai28,249 Aufrufe • vor 3 Jahren

"ಜೈ ರಾಯಣ್ಣ - ನಮ್ಮ ಅಭಿವೃದ್ಧಿ ಮಾಡೆಲ್ ನಮಗೆ ಶ್ರೀ ರಕ್ಷೆಯಣ್ಣ" ಸುಳ್ಳಾಡುವುದನ್ನೇ ದಿನನಿತ್ಯದ ಕಾಯಕವನ್ನಾಗಿಸಿಕೊಂಡಿರುವ ಮುಖ್ಯಮಂತ್ರಿ Siddaramaiah ಅವರೆ, ನಿನ್ನೆ ಶಿಗ್ಗಾಂವಿಯ ಹುಲಗೂರಿನಲ್ಲಿ ನೀವು ಬೊಮ್ಮಾಯಿ ಅವರು ಒಂದೇ ಒಂದು ಮನೆ ಕಟ್ಟಿಲ್ಲ ಎಂದು ಸುಳ್ಳು ಹೇಳಿದ್ದಿರಿ. ನಾವು 2021-22ನೇ ಸಾಲಿನಲ್ಲಿ ಪ್ರವಾಹಕ್ಕೊಳಗಾಗಿದ್ದ ಶಿಗ್ಗಾಂವಿಯ ಹಿರೇಮಣಕಟ್ಟಿ ಗ್ರಾಮವೊಂದರಲ್ಲೆ 300ಕ್ಕಿಂತ ಹೆಚ್ಚು ಮನೆ ನಿರ್ಮಿಸಿದ್ದೇವೆ. ಶಿಗ್ಗಾಂವಿ-ಸವಣೂರು ತಾಲೂಕುಗಳಾದ್ಯಂತ 12 ಸಾವಿರಕ್ಕಿಂತ ಹೆಚ್ಚು ಮನೆ ನಿರ್ಮಾಣವಾಗಿವೆ, ಆ ಎಲ್ಲಾ ಮನೆಗಳ ಮುಂದೆ ನಿಂತು ನೀವೊಬ್ಬ ಸುಳ್ಳುಗಾರ ಎಂಬುದನ್ನು ನಿರೂಪಿಸುತ್ತೇವೆ.
Basavaraj S Bommai13,279 Aufrufe • vor 1 Jahr

ಎಸ್.ಎಸ್.ಎಲ್.ಸಿ ನಂತರ ವಿದ್ಯಾರ್ಥಿಗಳು ಆರ್ಥಿಕ ಮುಗ್ಗಟ್ಟಿನಿಂದ ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂಬುದನ್ನು ಅಂಕಿ ಅಂಶಗಳನ್ನು ಗಮನಿಸಿದಾಗ ತಿಳಿಯಿತು. ಈ ಹಿನ್ನೆಲೆಯಲ್ಲಿ ಈ ಸಾಲಿನಿಂದ ರಾಜ್ಯದ 8 ಲಕ್ಷ ವಿದ್ಯಾರ್ಥಿಗಳಿಗೆ ಪಿಯುಸಿ ಹಾಗೂ ಪದವಿಯಲ್ಲಿ ಉಚಿತ ಶಿಕ್ಷಣವನ್ನು ನೀಡಲು ತೀರ್ಮಾನಿಸಲಾಗಿದೆ.
Basavaraj S Bommai18,576 Aufrufe • vor 3 Jahren