CM of Karnataka's banner
CM of Karnataka's profile picture

CM of Karnataka

@CMofKarnataka1,635,888 subscribers

Official Page of the Chief Minister's Office, Karnataka

Shorts

ರಾಮನಗರದ ಗ್ಯಾರಂಟಿ ಯೋಜನೆಯ ಫಲಾನುಭವಿ ಮಹಿಳೆ ಬಿ.ಕೆ.ತುಳಸಿ ಅವರು ಕಳೆದ ಏಳು ತಿಂಗಳ ಗೃಹಲಕ್ಷ್ಮಿ ಹಣ ಕೂಡಿಟ್ಟು ಮಹಾನವಮಿಯ ದಿನ ಹೊಸ ವಾಷಿಂಗ್ ಮೆಷಿನ್ ಖರೀದಿಸಿ, ಪೂಜಿಸುತ್ತಿರುವ ವೀಡಿಯೋ ನನ್ನ ಹಬ್ಬದ ಸಂಭ್ರಮವನ್ನು ಇಮ್ಮಡಿಯಾಗಿಸಿತು. ಸ್ತ್ರೀಸಬಲೀಕರಣದ ಆಶಯದೊಂದಿಗೆ ಜಾರಿಗೆ ಕೊಟ್ಟ ಗೃಹಲಕ್ಷ್ಮಿ ಯೋಜನೆಯು ಸ್ತ್ರೀಶಕ್ತಿಯನ್ನು ಆರಾಧಿಸುವ ನವರಾತ್ರಿಯಲ್ಲಿ ಮಹಿಳೆಯೊಬ್ಬರ ಸಂಭ್ರಮಕ್ಕೆ ಕಾರಣವಾಗಿರುವುದು ಹೆಚ್ಚು ಅರ್ಥಪೂರ್ಣ ಮತ್ತು ಸಾರ್ಥಕವೆನಿಸಿದೆ. ಇಂತಹ ಇನ್ನಷ್ಟು ಕುಟುಂಬಗಳ ಖುಷಿಗೆ ನಮ್ಮ ಯೋಜನೆ ಸಾಕ್ಷಿಯಾಗಲಿ ಎಂದು ಆಶಿಸುತ್ತೇನೆ. - ಮುಖ್ಯಮಂತ್ರಿ Siddaramaiah #Gruhalaxmi #GuaranteeScheme #KarnatakaGovernament

ರಾಮನಗರದ ಗ್ಯಾರಂಟಿ ಯೋಜನೆಯ ಫಲಾನುಭವಿ ಮಹಿಳೆ ಬಿ.ಕೆ.ತುಳಸಿ ಅವರು ಕಳೆದ ಏಳು ತಿಂಗಳ ಗೃಹಲಕ್ಷ್ಮಿ ಹಣ ಕೂಡಿಟ್ಟು ಮಹಾನವಮಿಯ ದಿನ ಹೊಸ ವಾಷಿಂಗ್ ಮೆಷಿನ್ ಖರೀದಿಸಿ, ಪೂಜಿಸುತ್ತಿರುವ ವೀಡಿಯೋ ನನ್ನ ಹಬ್ಬದ ಸಂಭ್ರಮವನ್ನು ಇಮ್ಮಡಿಯಾಗಿಸಿತು. ಸ್ತ್ರೀಸಬಲೀಕರಣದ ಆಶಯದೊಂದಿಗೆ ಜಾರಿಗೆ ಕೊಟ್ಟ ಗೃಹಲಕ್ಷ್ಮಿ ಯೋಜನೆಯು ಸ್ತ್ರೀಶಕ್ತಿಯನ್ನು ಆರಾಧಿಸುವ ನವರಾತ್ರಿಯಲ್ಲಿ ಮಹಿಳೆಯೊಬ್ಬರ ಸಂಭ್ರಮಕ್ಕೆ ಕಾರಣವಾಗಿರುವುದು ಹೆಚ್ಚು ಅರ್ಥಪೂರ್ಣ ಮತ್ತು ಸಾರ್ಥಕವೆನಿಸಿದೆ. ಇಂತಹ ಇನ್ನಷ್ಟು ಕುಟುಂಬಗಳ ಖುಷಿಗೆ ನಮ್ಮ ಯೋಜನೆ ಸಾಕ್ಷಿಯಾಗಲಿ ಎಂದು ಆಶಿಸುತ್ತೇನೆ. - ಮುಖ್ಯಮಂತ್ರಿ Siddaramaiah #Gruhalaxmi #GuaranteeScheme #KarnatakaGovernament

25,675 просмотров

Videos

CMofKarnataka's profile picture

ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಡದಿ ಟೌನ್‌ಶಿಪ್‌ ಯೋಜನೆಗೆ ಮರುಜೀವ ನೀಡಲಾಗುತ್ತಿದ್ದು, ಇದನ್ನು ವಿಶ್ವದರ್ಜೆಯ ರಸ್ತೆಗಳು, ಮೆಟ್ರೋ ಸಂಪರ್ಕ, ಅತ್ಯಾಧುನಿಕ ಕ್ರೀಡಾಂಗಣ, ಉದ್ಯಾನವನ ಹಾಗೂ ಸುಸಜ್ಜಿತ ವಸತಿ ಒಳಗೊಂಡ ಅತ್ಯಾಧುನಿಕ ಎಐ ಸಿಟಿಯಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಈ ಬೃಹತ್ ಯೋಜನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚಿತ್ರಣವನ್ನೇ ಬದಲಿಸಲಿದೆ. ರೈತರ ಹಿತರಕ್ಷಣೆ ನಮ್ಮ ಪ್ರಮುಖ ಆದ್ಯತೆಯಾಗಿದೆ. ಹಿಂದಿನ ಸರ್ಕಾರ ಎಕರೆಗೆ ಕೇವಲ ₹25 ಲಕ್ಷ ನಿಗದಿಪಡಿಸಿದ್ದರೆ, ನಮ್ಮ ಸರ್ಕಾರ ಪ್ರತಿ ಎಕರೆಗೆ ₹3 ಕೋಟಿಗೂ ಹೆಚ್ಚು ಪರಿಹಾರ ನೀಡಲು ತೀರ್ಮಾನಿಸಿದೆ. ಹಣದ ಬದಲಾಗಿ ಭೂಮಿ ಬಯಸುವ ರೈತರಿಗೆ 50% ಅಭಿವೃದ್ಧಿಪಡಿಸಿದ ಜಾಗವನ್ನು ನೀಡಲಾಗುವುದು. ಈ ಭೂಸ್ವಾಧೀನ ಪ್ರಕ್ರಿಯೆಯು ಸಂಪೂರ್ಣವಾಗಿ ಐಚ್ಛಿಕವಾಗಿದ್ದು, ಯೋಜನೆಗೆ ಜಮೀನು ನೀಡಲು ಇಷ್ಟವಿಲ್ಲದ ಯಾರ ಮೇಲೆಯೂ ಯಾವುದೇ ಒತ್ತಾಯವಿರುವುದಿಲ್ಲ. ಯುವಜನತೆಗೆ ಅಪಾರ ಉದ್ಯೋಗಾವಕಾಶ ಸೃಷ್ಟಿಸಿ, ನಮ್ಮ ಅನ್ನದಾತರಿಗೆ ಗೌರವಯುತ ಜೀವನ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ನಿಮ್ಮ ಸಹಕಾರವಿರಲಿ. - GBDA ಯೋಜನೆ ಕುರಿತು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ DK Shivakumar ಅವರ ಸಂದೇಶ

CM of Karnataka

60,709 просмотров • 2 дней назад

CMofKarnataka's profile picture

ಒಳ ಮೀಸಲಾತಿ ಜಾರಿಯಾದ ಬೆನ್ನಲ್ಲೇ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 72,186 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಮುಖ್ಯಮಂತ್ರಿ ಶ್ರೀ DK Shivakumar ಅವರ ನೇತೃತ್ವದ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ವೃಂದದಲ್ಲಿ ಖಾಲಿ ಇರುವ 32,177 ಹುದ್ದೆಗಳೂ ಭರ್ತಿಯಾಗಲಿದೆ. ಈ ಬೃಹತ್‌ ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕ ಹಾಗೂ ತ್ವರಿತವಾಗಿ ನಡೆಸಲು ಕಾಲಮಿತಿಯನ್ನು ನಿಗದಿ ಪಡಿಸಲಾಗಿದೆ. ಇದರಂತೆ ಮುಂದಿನ 4 ತಿಂಗಳ ಒಳಗಾಗಿ ನೇಮಕಾತಿ ಪರೀಕ್ಷೆಗಳು ನಡೆಯಲಿವೆ. ಒಟ್ಟಾರೆ 6 ತಿಂಗಳ ಒಳಗಾಗಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳಲಿವೆ. ನಾಡಿನ ಉದ್ಯೋಗಾಕಾಂಕ್ಷಿಗಳು ಅಗತ್ಯ ತಯಾರಿ ನಡೆಸಿ, ಇಂದಿನಿಂದಲೇ ಕಾರ್ಯಪ್ರವೃತ್ತರಾಗಿ. ನಿಮ್ಮಿಷ್ಟದ ಉದ್ಯೋಗವನ್ನು ನಿಮ್ಮದಾಗಿಸಿಕೊಳ್ಳಿ.

CM of Karnataka

58,224 просмотров • 1 месяц назад

CMofKarnataka's profile picture

ತುಂಗಭದ್ರಾ ಜಲಾನಯನ ಪ್ರದೇಶದ ರೈತರು ಮತ್ತು ಆ ಭಾಗದ ಜನರಿಗೆ ಸಿಹಿಸುದ್ದಿಯೊಂದನ್ನು ತಲುಪಿಸುವ ಉದ್ದೇಶದಿಂದ ಈ ವೀಡಿಯೋವನ್ನು ಹಂಚಿಕೊಳ್ಳುತ್ತಿದ್ದೇನೆ. ಕಳೆದ ವರ್ಷ ತುಂಗಭದ್ರಾ ಜಲಾಶಯದ 19ನೇ ಗೇಟ್ ಕೊಚ್ಚಿಹೋದ ವೇಳೆ ಕೇವಲ 6 ದಿನಗಳಲ್ಲಿ ಹೊಸ ಗೇಟ್ ಅಳವಡಿಸಿ, ಜಲಾಶಯದಿಂದ ನೀರು ಪೋಲಾಗದಂತೆ ತಡೆದು ರೈತರ ಹಿತ ಕಾಪಾಡಿದ್ದೆವು. ಅಂದೇ ಮತ್ತೆ ಇಂತಹ ಘಟನೆಗೆ ಅವಕಾಶ ನೀಡಬಾರದು ಎಂಬ ಸಂಕಲ್ಪಗೈದಿದ್ದ ನಾವು ಈಗ ಅಣೆಕಟ್ಟಿನ ಎಲ್ಲಾ 33 ಗೇಟುಗಳಿಗೆ ಹೊಸ ಗೇಟ್ ಅಳವಡಿಕೆ ಮಾಡಿದ್ದೇವೆ. ಜೂನ್ 25ನೇ ತಾರೀಖು ಕೇಂದ್ರ ಸಚಿವರಾದ ಶ್ರೀ ಸಿ.ಆರ್.ಪಾಟೀಲ್, ಆಂಧ್ರಪ್ರದೇಶದ ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಹಾಗೂ ತೆಲಂಗಾಣದ ಮುಖ್ಯಮಂತ್ರಿ ಶ್ರೀ ರೇವಂತ ರೆಡ್ಡಿಯವರ ಜೊತೆಗೂಡಿ ಹೊಸ ಗೇಟ್‌ಗಳನ್ನು ಲೋಕಾರ್ಪಣೆಗೊಳಿಸುತ್ತಿದ್ದೇನೆ. ಲಕ್ಷಾಂತರ ರೈತರ ಜಮೀನುಗಳಿಗೆ ನೀರಿನ ಆಸರೆಯಾಗಿರುವ, ಕೋಟ್ಯಂತರ ಜೀವಗಳಿಗೆ ಜೀವಜಲವುಣಿಸುತ್ತಿರುವ ತುಂಗಭದ್ರಾ ಜಲಾಶಯ ನಮ್ಮವರಿಂದ ಬಂದ ಬಳುವಳಿ. ಅದನ್ನು ಸುಸ್ಥಿತಿಯಲ್ಲಿಟ್ಟು, ಮುಂದಿನ ತಲೆಮಾರುಗಳಿಗೂ ಅದರ ಲಾಭ ದಕ್ಕುವಂತೆ ಮಾಡುವುದು ನಮ್ಮ ಕರ್ತವ್ಯ. ನಾವಿದನ್ನು ಅತ್ಯಂತ ಶ್ರದ್ಧೆಯಿಂದ ಮಾಡಿದ್ದೇವೆ. ಈ ಯೋಜನೆಯೂ ನಿಮ್ಮದೇ, ಕಾರ್ಯಕ್ರಮವೂ ನಿಮ್ಮದೆ. ನಿಮ್ಮೆಲ್ಲರ ಶುಭ ಹಾರೈಕೆ ನಮ್ಮೊಂದಿಗಿರಲಿ. - ಮುಖ್ಯಮಂತ್ರಿ ಶ್ರೀ DK Shivakumar

CM of Karnataka

19,854 просмотров • 1 месяц назад

CMofKarnataka's profile picture

ಮುಖ್ಯಮಂತ್ರಿ ಶ್ರೀ DK Shivakumar ಅವರ ಮುಂದಾಳತ್ವದಲ್ಲಿ ಬೆಂಗಳೂರು ನಗರದ ಚಿತ್ರಣ ಬದಲಾಗುತ್ತಿದೆ. ಸಂಚಾರ ದಟ್ಟಣೆ, ಟ್ರಾಫಿಕ್ ಸಿಗ್ನಲ್ ಗಳಿಂದ ಹೈರಾಣಾಗಿದ್ದ ವಾಹನ ಸವಾರರಿಗೆ ದಟ್ಟಣೆ ರಹಿತ, ಸಿಗ್ನಲ್ ಮುಕ್ತ ಸಂಚಾರಕ್ಕೆ ಹೊಸ ಮಾರ್ಗಗಳು ತೆರೆದುಕೊಳ್ಳುತ್ತಿವೆ. ನಗರದಲ್ಲಿ ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಎಂ.ಕೃಷ್ಣ ದಶಪಥ ರಸ್ತೆ ಲೋಕಾರ್ಪಣೆಗೊಂಡು ದಿನ ಕಳೆಯುವುದರೊಳಗೆ ಹೆಬ್ಬಾಳ ಫ್ಲೈ ಓವರ್ ನಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಿಬ್ಬಂದ ವಸತಿ ಗೃಹದ ವರೆಗೆ ಸಂಪರ್ಕ ಕಲ್ಪಿಸುವ ಮೂರು ಪಥಗಳ ಸುರಂಗ ಮಾರ್ಗಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಬೆಳೆಯುತ್ತಿರುವ ಬೆಂಗಳೂರು ನಗರದ ವೇಗಕ್ಕೆ ಅನುಗುಣವಾಗಿ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಿ, ನಗರದ ನಿವಾಸಿಗಳಿಗೆ ಸುಗಮ ಸಂಚಾರ ಸೌಲಭ್ಯ ಕಲ್ಪಿಸಲು ಟೊಂಕಕಟ್ಟಿ ನಿಂತಿರುವ ರಾಜ್ಯ ಸರ್ಕಾರದ ನಿರ್ಧಾರಗಳು ಬೆಂಗಳೂರಿಗರಲ್ಲಿ ನೆಮ್ಮದಿ ಮೂಡಿಸಿದೆ.

CM of Karnataka

13,441 просмотров • 1 месяц назад

CMofKarnataka's profile picture

ಇನ್ಫೋಸಿಸ್‌ ಸಂಸ್ಥೆಯ ಮುಖ್ಯಸ್ಥರಾದ ಸುಧಾ ಮೂರ್ತಿ ಹಾಗೂ ನಾರಾಯಣಮೂರ್ತಿ ಅವರು ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ನೀಡುವುದಿಲ್ಲ, ನಾವು ಹಿಂದುಳಿದ ಜಾತಿಯವರಲ್ಲ ಎಂದು ದೃಢೀಕರಣ ಪತ್ರ ನೀಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಸಮೀಕ್ಷೆ ಕೇವಲ ಹಿಂದುಳಿದವರಿಗಲ್ಲಾ ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು. ಇನ್ಫೋಸಿಸ್ ಸಂಸ್ಥೆಯವರು ಅಂದರೆ ಅವರು ಬೃಹಸ್ಪತಿಗಳೇ? ಸರ್ಕಾರ ಮಾಡುತ್ತಿರುವುದು ಹಿಂದುಳಿದವರ ಸಮೀಕ್ಷೆಯಲ್ಲ ಎಂದು ಈಗಾಗಲೇ ಹೇಳಿದೆ. ಇದು ಎಲ್ಲಾ ಜನರನ್ನು ಒಳಗೊಂಡಂತೆ ಮಾಡುತ್ತಿರುವ ಸಮೀಕ್ಷೆ. ಶಕ್ತಿ ಯೋಜನೆಯಡಿ ಬಡವರು, ಮೇಲ್ಜಾತಿಯವರು ಎಲ್ಲರೂ ಬಳಸಿಕೊಳ್ಳುತ್ತಾರೆ. ಈ ಬಗ್ಗೆ ತಪ್ಪು ಮಾಹಿತಿ ಹೋಗಿದೆ. ಸರ್ಕಾರ ಈ ಬಗ್ಗೆ ಜಾಹೀರಾತು ನೀಡಿದೆ, ಸಚಿವರು ಹಾಗೂ ಮುಖ್ಯಮಂತ್ರಿಗಳ ಸಂದೇಶಗಳನ್ನು ಜನರಿಗೆ ತಲುಪಿಸಲಾಗಿದೆ. ಸಮೀಕ್ಷೆಯನ್ನು ಹಿಂದುಳಿದವರ ಸಮೀಕ್ಷೆಯೆಂದು ಭಾವಿಸುವುದು ತಪ್ಪು. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರವೂ ಜಾತಿಗಣತಿಯನ್ನು ಮಾಡುತ್ತದೆ, ಆಗಲೂ ಇವರು ಸಹಕರಿಸುವುದಿಲ್ಲವೇ? ಅವರಿಗಿರುವ ತಪ್ಪು ಮಾಹಿತಿಯಿಂದಾಗಿ ಈ ರೀತಿ ಅಸಹಕಾರ ತೋರುತ್ತಿರಬಹುದು. ರಾಜ್ಯದಲ್ಲಿ ಸುಮಾರು 7 ಕೋಟಿ ಜನಸಂಖ್ಯೆಯಿದ್ದು, ಈ ಜನರ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆಯಾಗಿದೆ. - ಮುಖ್ಯಮಂತ್ರಿ Siddaramaiah

CM of Karnataka

30,068 просмотров • 9 месяцев назад