
Janata Dal Secular
@JanataDal_S • 67,134 subscribers
| ಜಾತ್ಯತೀತ ಜನತಾದಳ ಪಕ್ಷದ ಅಧಿಕೃತ ಖಾತೆ |The Official Twitter Account - Janata Dal (S)
Shorts
Videos

" Karnataka Congress ದುರಾಡಳಿತದಲ್ಲಿ ಕಾಂಗ್ರೆಸ್ ಮುಖಂಡರ ಗೂಂಡಾಗಿರಿ ಜೋರಾಗಿದೆ. ಸಚಿವ B Z Zameer Ahmed Khan ಪುತ್ರ ಝೈದ್ ಖಾನ್ ಸಿನಿಮಾದ ಪ್ಲೆಕ್ಸ್ʼಗಳನ್ನು ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವಾಚ್ಯವಾಗಿ, ಅಶ್ಲೀಲ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾನೆ. ಶಿಡ್ಲಘಟ್ಟದ ಕೋಟೆ ಸರ್ಕಲ್ ರಸ್ತೆಗಳಲ್ಲಿ ಅನುಮತಿ ಪಡೆಯದೆ, ಅಕ್ರಮವಾಗಿ ಫ್ಲೆಕ್ಸ್ ಬ್ಯಾನರ್ ಅಳವಡಿಸಿದ್ದಕ್ಕೆ, ಪೌರಾಯುಕ್ತೆ ಅಮೃತಗೌಡ ಅವರು, ರಸ್ತೆಯಲ್ಲಿ ಅಪಘಾತ ಹೆಚ್ಚಿದ್ದು, ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಬ್ಯಾನರ್ಗಳನ್ನು ತೆರವುಗೊಳಿಸಿದ್ದಾರೆ. ಇದಕ್ಕೆ ಕಾಂಗ್ರೆಸ್ ಮುಖಂಡ ದೂರವಾಣಿ ಕರೆ ಮಾಡಿ, ಬ್ಯಾನರ್ ತೆಗೆಸಿದವರನ್ನು ‘ಬೆಂಕಿ ಹಾಕಿ ಸುಟ್ಟು ಹಾಕುತ್ತೇನೆ, ಚಪ್ಪಲಿಯಲ್ಲಿ ಹೊಡೆಸುತ್ತೇನೆ, ಕಾರ್ಯಕರ್ತರನ್ನು ಕರೆಸಿ ದಂಗೆ ಎಬ್ಬಿಸುತ್ತೇನೆ ಎಂದು ಮಹಿಳಾಧಿಕಾರಿಗೆ ಅಶ್ಲೀಲವಾಗಿ ನಿಂದಿಸಿ ಬೆದರಿಕೆಯೊಡ್ಡಿದ್ದಾನೆ. ಸಿಎಂ Siddaramaiah , ಗೃಹ ಸಚಿವರ Dr. G Parameshwara ಅವರೇ ಪೌರಾಯುಕ್ತೆಗೆ ಧಮ್ಕಿ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್ ಗೂಂಡಾ ರಾಜೀವ್ ಗೌಡನನ್ನು ತಕ್ಷಣವೇ ಬಂಧಿಸಿ, ಕಾನೂನು ಕ್ರಮ ಜರುಗಿಸಿ. ಕಾಂಗ್ರೆಸ್ ಅಧ್ಯಕ್ಷ DK Shivakumar ಅವರೇ, #KPCC ರಾಜ್ಯ ಸಂಯೋಜಕನಾಗಿರುವ ಬೀದಿ ರೌಡಿ ರಾಜೀವ್ ಗೌಡನನ್ನು ಮೊದಲು ಪಕ್ಷದಿಂದ ವಜಾ ಮಾಡಿ. #CongressRowdyism #ಕಾಂಗ್ರೆಸ್_ಗೂಂಡಾಗಿರಿ
Janata Dal Secular142,816 görüntüleme • 4 ay önce

ಮಿಸ್ಟರ್ “ಗೊತ್ತಿಲ್ಲ” ಗೃಹ ಸಚಿವ Dr. G Parameshwara ಅವರೇ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎನ್ನುವುದಕ್ಕೆ ಹೆಚ್ಚುತ್ತಿರುವ ಇಂತಹ ಘಟನೆಗಳೇ ಸಾಕ್ಷಿ. ಕಾನೂನು, ಪೊಲೀಸರ ಭಯವಿಲ್ಲದೆ, ಬೀದಿ ಬೀದಿಯಲ್ಲಿ ರೌಡಿಗಳು, ಪುಂಡರು ಲಾಂಗು, ಮಚ್ಚು ಹಿಡಿದು ರಾಜಾರೋಷವಾಗಿ ಓಡಾಡುವ ಮಟ್ಟಕ್ಕೆ ಪೊಲೀಸ್ ಇಲಾಖೆಯನ್ನು ನಿಷ್ಕ್ರಿಯ ಮಾಡಿರುವ Karnataka Congress ಸರ್ಕಾರದ ಆಡಳಿತಕ್ಕೆ ನಾಚಿಕೆಯಾಗಬೇಕು! ಕಾಂಗ್ರೆಸ್ ದುರಾಡಳಿತದಲ್ಲಿ ಗೃಹ ಇಲಾಖೆಯ ವೈಫಲ್ಯ ಹಾಗೂ ನಿಮ್ಮ ಅಸಮರ್ಥತೆಯಿಂದ ರಾಜ್ಯದ ಜನರಿಗೆ ಸುರಕ್ಷತೆಯ ಭಯ ಇನ್ನಿಲ್ಲದೆ ಕಾಡುತ್ತಿರುವುದಂತು ಸತ್ಯ. CM of Karnataka DGP KARNATAKA ಬೆಂಗಳೂರು ನಗರ ಪೊಲೀಸ್ BengaluruCityPolice #CongressFailsKarnataka
Janata Dal Secular21,224 görüntüleme • 1 ay önce

,Siddaramaiah ನಿಮಗೆ ಅಧಿಕಾರದ ದರ್ಪ ತಲೆಗೇರಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಹೊಡೆಯಲು ಕೈ ಎತ್ತುವುದು ನಿಮ್ಮ ಸ್ಥಾನಕ್ಕೆ, ಘನತೆಗೆ ಕಿಂಚಿತ್ತೂ ಶೋಭೆ ತರುವುದಿಲ್ಲ. ಮುಖ್ಯಮಂತ್ರಿ ಸ್ಥಾನದಲ್ಲಿರುವ ನೀವು, ಬೀದಿ ರೌಡಿಯಂತೆ ಸಾರ್ವಜನಿಕ ವೇದಿಕೆಯಲ್ಲಿಯೇ ಏಕವಚನ ಪ್ರಯೋಗಿಸಿ, ಎಸ್ಪಿ (SP)ಗೆ ಹೊಡೆಯಲು ಯತ್ನಿಸಿದ್ದು ಅಕ್ಷಮ್ಯ ಅಪರಾಧ. ನಿಮ್ಮ ಅಧಿಕಾರದ ಅವಧಿ ಕೇವಲ 5 ವರ್ಷ. ಆದರೆ ಸರ್ಕಾರಿ ಅಧಿಕಾರಿ 60 ವರ್ಷ ವಯಸ್ಸಿನವರೆಗೂ ಸೇವೆ ಸಲ್ಲಿಸುತ್ತಾರೆ. ಅಧಿಕಾರ ಯಾರಿಗೂ ಶಾಶ್ವತ ಅಲ್ಲ. ನಿಮ್ಮ ದುರ್ವರ್ತನೆ ಸರಿಪಡಿಸಿಕೊಳ್ಳಿ. Karnataka Congress
Janata Dal Secular59,268 görüntüleme • 1 yıl önce

ಶೋಕಿಲಾಲಾ, ರೀಲ್ಸ್ ರಾಜಾ ಮಿಸ್ಟರ್ ಡಿಸಿಎಂ DK Shivakumar ಹೆಬ್ಬಾಳ ಫ್ಲೈಓವರ್ ಮೇಲೆ ಚಾಲನೆ ಮಾಡಿದ ದ್ವಿಚಕ್ರವಾಹನ ( KA 04 JZ 2087 ) 34ಕ್ಕೂ ಹೆಚ್ಚು ಬಾರಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದೆ. ದಂಡದ ಮೊತ್ತ 18,500 ರೂ. ಬಾಕಿ ಇದೆ. ಪ್ರಚಾರಕ್ಕಾಗಿ ಫೋಟೋ ಶೂಟ್ , ರೀಲ್ಸ್ ಶೋಕಿ ಬಿಟ್ಟು ಮೊದಲು ಸಚಿವ ಸ್ಥಾನದ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿ. Hebbal Traffic Police Station ಅವರೇ, ದ್ವಿಚಕ್ರವಾಹನ ( KA 04 JZ 2087 ) ದ ದಂಡವನ್ನು ವಸೂಲಿಮಾಡುವ ಕೆಲಸ ಆಗಲಿ.
Janata Dal Secular47,154 görüntüleme • 10 ay önce

ಕಾಂಗ್ರೆಸ್ನ ಅಬ್ಬೆಪಾರಿ ಶಿವರಾಮೇಗೌಡ, ಮಂಡ್ಯದ ಗಂಡು, ನಟ ಹಾಗೂ ಮಾಜಿ ಸಂಸದರಾದ ದಿವಂಗತ ಅಂಬರೀಷ್ ಅವರಿಗೆ ನಿಂದಿಸಿರುವ ಪರಿ. Karnataka Congress ಅಧ್ಯಕ್ಷ DK Shivakumar ಆತ್ಯಾಪ್ತ ಹಾಗೂ ಸಂಬಂಧಿಯಾಗಿರುವ ಎಲ್ಆರ್ ಶಿವರಾಮೇಗೌಡನ ಅಣಿಮುತ್ತುಗಳು ! ಕಾಂಗ್ರೆಸ್ ಪಕ್ಷಕ್ಕೆ ಸ್ವಲ್ಪವಾದರೂ, ನೈತಿಕತೆ ಇದ್ದರೇ ಇಂಥಹ ಹೊಲಸು ವ್ಯಕ್ತಿಯನ್ನು ಈ ಕೂಡಲೇ ಪಕ್ಷದಿಂದ ವಜಾಗೊಳಿಸಬೇಕು.
Janata Dal Secular23,695 görüntüleme • 4 ay önce

ಕರ್ನಾಟಕದಲ್ಲಿ ವ್ಯಾಪಾರ ಮಾಡಿ ಲಾಭಗಳಿಸುವ ಇವರಿಗೆ ಎಷ್ಟು ಸೊಕ್ಕು ? ಕನ್ನಡ, ಕನ್ನಡಿಗರನ್ನು ಅವಹೇಳನ ಮಾಡುವ ಕನ್ನಡದ್ರೋಹಿ ಉದ್ದಿಮೆದಾರರನ್ನು ಕರ್ನಾಟಕದಲ್ಲಿ ವ್ಯವಹಾರ ಮಾಡಲು ಬಿಡಬಾರದು. ಅನ್ಯ ರಾಜ್ಯದಿಂದ ವಲಸೆ ಬಂದು ಕನ್ನಡದ ಅನ್ನ ತಿನ್ನುತ್ತಾ, ಕನ್ನಡದ ನೀರು ಕುಡಿಯುತ್ತಾ, ಕನ್ನಡಿಗರನ್ನೇ ಅವಮಾನಿಸುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. Karnataka Congress ಸರ್ಕಾರ ಇಂತಹ ಕನ್ನಡ ವಿರೋಧಿಗಳನ್ನು ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ, ಗಡಿಪಾರು ಮಾಡಬೇಕಾಗಿ Janata Dal Secular ಪಕ್ಷವು ಆಗ್ರಹಿಸುತ್ತದೆ.
Janata Dal Secular51,513 görüntüleme • 1 yıl önce

CDಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್!! 1.ಡಿಸಿಎಂ ಡಿ.ಕೆ.ಶಿವಕುಮಾರ್ 2.ಕೃಷಿ ಸಚಿವ ಚೆಲುವರಾಯಸ್ವಾಮಿ 3.ಕಂದಾಯ ಸಚಿವ ಕೃಷ್ಣಭೈರೇಗೌಡ 4. IT BT ಸಚಿವ ಪ್ರಿಯಾಂಕ್ ಖರ್ಗೆ + ಇನ್ನೂ ಒಬ್ಬ ಸಚಿವ + ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ •ಇವರೆಲ್ಲರೂ ಹೂಡಿರುವ ಸಂಚು ಏನ್ ಗೊತ್ತಾ? ಪ್ರಧಾನಿಗಳಾದ ಮಾನ್ಯ ಶ್ರೀ Narendra Modi ಅವರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ | HD Kumaraswamy ಅವರಿಗೆ ಕೆಟ್ಟ ಹೆಸರು ತರುವುದು. ಈ ಸಂಚು ಸಾಕಾರಗೊಳಿಸಲು CDಶಿವಕುಮಾರ್ ಸಾಹೇಬರು ವಕೀಲರಾದ ಶ್ರೀ ದೇವರಾಜೇಗೌಡರಿಗೆ ಆಫರ್ ಮಾಡಿದ ಮೊತ್ತ ಬರೋಬ್ಬರಿ ₹100 ಕೋಟಿ!! #CDಶಿವಕುಮಾರ್ #ಪೆನ್_ಡ್ರೈವ್_ಗ್ಯಾಂಗ್ #Shivakumar_Investigation_Team
Janata Dal Secular84,103 görüntüleme • 2 yıl önce

ಕರ್ನಾಟಕ ರಾಜ್ಯ ರಾಜಕೀಯದ ಇತಿಹಾಸದಲ್ಲಿ ಕನ್ನಡಿಗರ ಗಟ್ಟಿಧ್ವನಿಯಾಗಿ, ಕಳೆದ 25 ವರ್ಷಗಳಿಂದ ಈ ನಾಡಿನ ಸರ್ವತೋಮುಖ ಅಭಿವೃದ್ಧಿಗೆ ಕಟಿಬದ್ಧವಾಗಿ ಜೆಡಿಎಸ್ ಪಕ್ಷ ಹೋರಾಟ ಮಾಡುತ್ತಾ ಬಂದಿದೆ. ಮಾಜಿ ಪ್ರಧಾನಿಗಳು ಹಾಗೂ ಪಕ್ಷದ ಸ್ಥಾಪಕರಾದ ಪೂಜ್ಯ ಶ್ರೀ ಹೆಚ್.ಡಿ. ದೇವೇಗೌಡರವರ ಅವಿರತ ಪರಿಶ್ರಮ ಮತ್ತು ದಣಿವರಿಯದ ನಾಯಕತ್ವದಿಂದ, ಪ್ರಾದೇಶಿಕ ಪಕ್ಷವೊಂದು 25 ವರ್ಷ ಪೂರೈಸಲು ಕಾರಣೀಭೂತವಾಗಿದೆ. ನಮ್ಮ ನಿಷ್ಠಾವಂತ ಕಾರ್ಯಕರ್ತರು ಹಗಲಿರುಳೆನ್ನದೆ ನಾಯಕರ ಹೆಗಲಿಗೆ ಹೆಗಲು ಕೊಟ್ಟು ನಿಸ್ವಾರ್ಥವಾಗಿ ದುಡಿಯುತ್ತಿದ್ದಾರೆ. ನಮ್ಮ ಪಕ್ಷವು ಅನೇಕ ಸವಾಲುಗಳನ್ನು ಎದುರಿಸಿ, ಅನೇಕ ರಾಜಕೀಯ ಕುತಂತ್ರಗಳನ್ನು ಮೆಟ್ಟಿ ನಿಂತು, ಇವತ್ತು ಬಲಿಷ್ಠ ಪ್ರಾದೇಶಿಕ ಪಕ್ಷವಾಗಿ ಬೆಳೆದಿದೆ. #ಜೆಡಿಎಸ್ #ಬೆಳ್ಳಿಹಬ್ಬ #JDS #25years #SilverJubilee #SilverJubileeCelebration
Janata Dal Secular28,260 görüntüleme • 6 ay önce

ದೇವರ ಮೇಲೆ ಭಕ್ತಿ ಇಲ್ಲ, ರಾಷ್ಟ್ರಧ್ವಜದ ಮೇಲೆ ಗೌರವವೂ ಇಲ್ಲ, ಅಭಿಮಾನವಿಲ್ಲ. ಕೊನೆಗೆ, ಹೆಣ್ಣುಮಕ್ಕಳು ಬಿಡಿಸಿರುವ ರಂಗೋಲಿ ಚಿತ್ತಾರಗಳ ಮೇಲೆಯೂ ಎಳ್ಳಷ್ಟೂ ಹೆಮ್ಮೆ ಇಲ್ಲ.. ಅಧಿಕಾರ ಅಹಂಕಾರಕ್ಕಲ್ಲ, ಅಧಿಕಾರ ಅಲಂಕಾರಕ್ಕಲ್ಲ. ಅಧಿಕಾರವೆನ್ನುವುದು ಜನಸೇವೆಗೊಂದು ಮಾರ್ಗ.. ಇಲ್ಲಿ ಅಧಿಕಾರವೇ ದುರಂಹಕಾರವಾಗಿ ಮೈವೇತ್ತಿ ನಿಂತಿದೆ. ಬೂಟಾಟಿಕೆ ಶೂರನಿಗೆ ಮೈಯ್ಯೆಲ್ಲಾ ಪಂಗನಾಮ! DK Shivakumar Karnataka Congress Congress Rahul Gandhi CM of Karnataka
Janata Dal Secular15,725 görüntüleme • 4 ay önce

"ಯುದ್ಧದ ಕ್ರೆಡಿಟ್ ಸೇನೆಗೆ ಸೇರಬೇಕು" ಎಂದು ಸ್ವತಃ ಸಿಎಂ Siddaramaiah ಅವರೇ ಹೇಳಿದ್ದಾರೆ. ಆದರೆ, ಹೈಲು ಪೈಲು "ಕರ್ನಾಟಕ ಯುವ ಪ್ರದೇಶ ಕಾಂಗ್ರೆಸ್"ನವರು ಸೈನಿಕರಿಗೆ ಸಲ್ಲಬೇಕಾದ ಗೆಲುವಿನ ಶ್ರೇಯಸ್ಸನ್ನು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಫ್ಲೆಕ್ಸ್ಗಳನ್ನು ಹಾಕಿ ವಿಧಾನಸೌಧದ ಸೌಂದರ್ಯವನ್ನು Karnataka Congress ಪಕ್ಷ ಹಾಳುಮಾಡಿದೆ. DK Shivakumar
Janata Dal Secular35,179 görüntüleme • 1 yıl önce

ಕನ್ನಡಿಗರ ಹೆಮ್ಮೆಯ ಕರ್ನಾಟಕ ವಿದ್ಯುತ್ ಕಾರ್ಖಾನೆಯನ್ನು (ಕವಿಕಾ) ಕಡೆಗಣಿಸಿ, 174.73 ಕೋಟಿ ರೂ. ಮೊತ್ತದ ವಿದ್ಯುತ್ ಪರಿವರ್ತಕಗಳನ್ನು ಖರೀದಿಸಲು Karnataka Congress ಸರ್ಕಾರ, ಕೇರಳ ಮೂಲಕದ ಕಂಪನಿಗೆ ರತ್ನಗಂಬಳಿ ಹಾಸಿದೆ. ಕಳೆದ 8 ದಶಕಗಳಿಂದಲೂ ಗುಣಮಟ್ಟದ ಟ್ರಾನ್ಸ್ಫಾರ್ಮಾರ್ಗಳ ತಯಾರಿಕೆಯಲ್ಲಿ ದೇಶದಲ್ಲೇ ಪ್ರಖ್ಯಾತಿ ಪಡೆದಿರುವ ರಾಜ್ಯದ ಕವಿಕಾವನ್ನು ಬದಿಗೊತ್ತಿರುವ ಇಂಧನ ಸಚಿವ KJ George , ಕೇರಳ ಎಲೆಕ್ನಿಕಲ್ ಅಂಡ್ ಅಲೈಡ್ ಇಂಜನಿಯರಿಂಗ್ ಲಿಮಿಟೆಡ್ನಿಂದಲೇ 11,721 ವಿದ್ಯುತ್ ಪರಿವರ್ತಕಗಳನ್ನು ಖರೀದಿಸಲು ಮುಂದಾಗಿದ್ದಾರೆ. ಇದಕ್ಕಾಗಿ 4 ಜಿ ವಿನಾಯಿತಿಯನ್ನೂ ನೀಡಿದ್ದಾರೆ. ಬೆಂಗಳೂರಿನ ಯಲಹಂಕದ ಕೋಗಿಲು ಬಳಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನೆಲೆಸಿದ್ದ ಕೇರಳದ ವಲಸಿಗರಿಗೆ ವಸತಿ ಕಲ್ಪಿಸುವಂತೆ, ಕೇರಳದ ಸಿಎಂ ಪಿಣರಾಯಿ ವಿಜಯನ್ ಮತ್ತು ಅಲ್ಲಿನ ಕಾಂಗ್ರೆಸ್ ಸಂಸದ ಕೆ.ಸಿ.ವೇಣುಗೋಪಾಲ್ ಅವರು ಮಧ್ಯ ಪ್ರವೇಶಿಸಿ, Siddaramaiah ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಈಗ ಮತ್ತೊಮ್ಮೆ ಕೇರಳ ಲಾಬಿಗೆ ಮಣಿದು, ಕಾಂಗ್ರೆಸ್ ಸರ್ಕಾರ ಕನ್ನಡಿಗರಿಗೆ ದ್ರೋಹ ಬಗೆಯುತ್ತಿದೆ. #CongressFailsKarnataka
Janata Dal Secular16,816 görüntüleme • 4 ay önce

ಗೋಮುಖ ವ್ಯಾಘ್ರ DK Shivakumar ಅಸಲೀ ಮುಖ ಇದು. ಕಂಡ ಕಂಡವರ ಆಸ್ತಿ, ಜಮೀನುಗಳನ್ನು ಹೆದರಿಸಿ, ಬೆದರಿಸಿ ಕಬಳಿಸಿರುವ ರಿಯಲ್ ಎಸ್ಟೇಟ್ ದಂಧೆಕೋರ, Karnataka Congress ಅಧ್ಯಕ್ಷನ ದರ್ಪ, ದೌರ್ಜನ್ಯಕ್ಕೆ ಬಲಿಯಾದ ಮಹಿಳೆಯ ಕುಟುಂಬದ ಕಣ್ಣೀರಿನ ಕಥೆ. ಇಂತಹ ದುಷ್ಟ, ನೀಚವ್ಯಕ್ತಿ ಮುಖ್ಯಮಂತ್ರಿಯಾದರೇ ರಾಜ್ಯದ ಗತಿಯೇನು ?
Janata Dal Secular16,172 görüntüleme • 4 ay önce
